ಅಕ್ರಮ ಮರಳು ಸಂಗ್ರಹಣೆ ಸ್ಥಳಕ್ಕೆ ಅಧಿಕಾರಿಗಳ ದಾಳಿ

ಕೊಡಗು: 300ಕ್ಕೂ ಹೆಚ್ಚು ಮೆಟ್ರಿಕ್ ಟನ್ ಮರಳು ಸಂಗ್ರಹ ಮಾಡಲಾಗಿದ್ದ ನೆಲ್ಲಿಹುದಿಕೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ
ನಲ್ವತ್ತೆಕ್ರೆಯ ಖಾಸಗಿ ಜಾಗವೊಂದರಲ್ಲಿ ಶೇಖರಿಸಿಡಲಾಗಿದ್ದ ಮರಳು ವಶಕ್ಕೆ ಪಡೆಯಲಾಗಿದೆ.
ಸೋಮವಾರಪೇಟೆ ತಾಲ್ಲೂಕು ತಹಸೀಲ್ದಾರ್ ಗೋವಿಂದರಾಜು,ಭೂ ವಿಜ್ಞಾನ ಇಲಾಖೆಯ ಅಧಿಕಾರಿ ಶ್ರೀನಿವಾಸ್
ನೇತ್ರತ್ವದಲ್ಲಿ ದಾಳಿ ನಡೆದಿದ್ದು ಸೂಕ್ತ ಕ್ರಮ ಕೈಗೊಳ್ಳಲಾಗಿದೆ.