ಆ.15 ರಂದು ಸ್ವಾತಂತ್ರ್ಯ ದಿನಾಚರಣೆ

ಕೊಡಗು ಜಿಲ್ಲಾಡಳಿತ ವತಿಯಿಂದ 75 ನೇ ಸ್ವಾತಂತ್ರ್ಯ ದಿನಾಚರಣೆಯು ಆಗಸ್ಟ್ 15 ರಂದು ಬೆಳಗ್ಗೆ 9 ಗಂಟೆಗೆ ನಗರದ ಕೋಟೆ ಆವರಣದಲ್ಲಿ ನಡೆಯಲಿದೆ. ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಅವರು ಧ್ವಜಾರೋಹಣ ನೆರವೇರಿಸಲಿದ್ದಾರೆ.

ಶಾಸಕರಾದ ಎಂ.ಪಿ.ಅಪ್ಪಚ್ಚು ರಂಜನ್ ಅಧ್ಯಕ್ಷತೆ ವಹಿಸಲಿದ್ದಾರೆ. ಶಾಸಕರಾದ ಕೆ.ಜಿ.ಬೋಪಯ್ಯ, ಎಂ.ಪಿ.ಸುನೀಲ್ ಸುಬ್ರಮಣಿ, ವೀಣಾ ಅಚ್ಚಯ್ಯ, ಎಸ್.ಎಲ್.ಭೋಜೇಗೌಡ, ಆಯನೂರು ಮಂಜುನಾಥ, ಸಂಸದರಾದ ಪ್ರತಾಪ್ ಸಿಂಹ, ಕರ್ನಾಟಕ ರಾಜ್ಯ ಪಶ್ಚಿಮ ಘಟ್ಟಗಳ ಸಂರಕ್ಷಣಾ ಕಾರ್ಯಪಡೆ ಸಮಿತಿಯ ಅಧ್ಯಕ್ಷರಾದ ಎಸ್.ರವಿ ಕುಶಾಲಪ್ಪ, ಕೊಡಗು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ವಿ.ಅನ್ಬುಕುಮಾರ್, ಜಿಲ್ಲಾಧಿಕಾರಿ ಚಾರುಲತಾ ಸೋಮಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾ ಮಿಶ್ರ, ಜಿ.ಪಂ.ಸಿಇಒ ಭನ್ವರ್ ಸಿಂಗ್ ಮೀನಾ ಇತರರು ಪಾಲ್ಗೊಳ್ಳಲಿದ್ದಾರೆ.