ಕೊಡಗಿನ ಶಾಸಕರಿಗೆ ಕೈಕೊಟ್ಟ ಸಚಿವ ಪಟ್ಟ!

ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ನಂತರ ಸಿ.ಎಂ ಸ್ಥಾನ ಅಲಂಕರಿಸಿರುವ ಬಸವರಾಜ ಬೊಮ್ಮಾಯಿ ಸಂಪುಟಕ್ಕೆ 29 ಮಂದಿ ನೂತನ ಸಚಿವರ ಪಟ್ಟಿ ಯನ್ನು ಸಿ.ಎಂ ಬಸವರಾಜ ಬೊಮ್ಮಾಯಿ ಬಿಡುಗಡೆಗೊಳಿಸಿದ್ದು ಕೊಡಗಿನ ಇಬ್ಬರ ಶಾಸಕರನ್ನು ಕೈ ಬಿಡಲಾಗಿದೆ. ಈ ಭಾರಿ ಡಿಸಿಎಂ ಸ್ಥಾನ ಕೈಬಿಟ್ಟ ಸರ್ಕಾರ ಹಳೇ ಮೈಸೂರು ಪ್ರಾಂತ್ಯದ ಶಾಸಕರು ಸೇರಿದಂತೆ ರಾಜ್ಯದ 13 ಜಿಲ್ಲೆಗಳ ಹಿರಿಯ ಶಾಸಕರನ್ನು ಕೈ ಬಿಡಲಾಗಿದೆ.ಸದ್ಯ ನೂತನ ಸಚಿವರ ಪಟ್ಟಿ ರಾಜ್ಯಪಾಲರಿಗೆ ರವಾನೆಯಾಗಿದ್ದು,ಕೊಡಗಿನ ಇಬ್ಬರು ಶಾಸಕರು ಬೆಂಗಳೂರಿಗೆ ತೆರಳಿರುವ ಮಾಹಿತಿ ಲಭ್ಯವಾಗಿದೆ.

ಸಚಿವ ಸಂಪುಟ..ಪಟ್ಟಿ
1.ಕೆ.ಎಸ್.ಈಶ್ವರಪ್ಪ -ಶಿವಮೊಗ್ಗ
2.ಆರ್.ಅಶೋಕ್- ಪದ್ಮನಾಭ ನಗರ
3.ಬಿಸಿ ಪಾಟೀಲ್ – ಹಿರೇಕೇರೂರು
4.ಡಾ.ಸಿ.ಎನ್.ಅಶ್ವತ್ಥ ನಾರಾಯಣ – ಮಲ್ಲೇಶ್ವರ
5.ಬಿ.ಶ್ರೀ ರಾಮುಲು- ಮೊಳಕಾಲುಮ್ಮೂರು
6.ಉಮೇಶ್ ಕತ್ತಿ- ಹುಕ್ಕೇರಿ
7.ಎಸ್.ಟಿ.ಸೋಮಶೇಖರ್- ಯಶವಂತಪುರ
8.ಡಾ.ಕೆ.ಸುಧಾಕರ್ – ಚಿಕ್ಕಬಳ್ಳಾಪುರ
9.ಬೈರತಿ‌ ಬಸವರಾಜ – ಕೆ ಆರ್ ಪುರಂ
10.ಮುರುಗೇಶ್ ನಿರಾಣಿ – ಬಿಳಿಗಿ
11.ಶಿವರಾಂ ಹೆಬ್ಬಾರ್- ಯಲ್ಲಾಪುರ
12.ಶಶಿಕಲಾ ಜೊಲ್ಲೆ- ನಿಪ್ಪಾಣಿ
13.ಕೆಸಿ ನಾರಾಯಣ್ ಗೌಡ – ಕೆ‌ಆರ್ ಪೇಟೆ
14.ಸುನೀಲ್ ಕುಮಾರ್ – ಕಾರ್ಕಳ
15.ಅರಗ ಜ್ಞಾನೇಂದ್ರ – ತೀರ್ಥ ಹಳ್ಳಿ
16.ಗೋವಿಂದ ಕಾರಜೋಳ-ಮುಧೋಳ
17.ಮುನಿರತ್ನ- ಆರ್ ಆರ್ ನಗರ
18.ಎಂ.ಟಿ.ಬಿ ನಾಗರಾಜ್ – ಎಂ ಎಲ್ ಸಿ
19.ಗೋಪಾಲಯ್ಯ- ಮಹಾಲಕ್ಷ್ಮಿ ಲೇಔಟ್
20.ಮಾಧುಸ್ವಾಮಿ- ಚಿಕ್ಕನಾಯಕನಹಳ್ಳಿ
21.ಹಾಲಪ್ಪ ಆಚಾರ್ – ಯಲ್ಬುರ್ಗ
22.ಶಂಕರ್ ಪಾಟೀಲ್ ಮುನೇನಕೊಪ್ಪ – ನವಲುಗುಂದ
23.ಕೋಟಾ ಶ್ರೀನಿವಾಸ ಪೂಜಾರಿ – ಎಂ ಎಲ್ ಸಿ
24.ಪ್ರಭು ಚೌವ್ಹಾಣ್ – ಔರಾದ್
25.ವಿ ಸೋಮಣ್ಣ – ಗೋವಿಂದ್ ರಾಜನಗರ
26.ಎಸ್ ಅಂಗಾರ-ಸುಳ್ಯ
27.ಆನಂದ್ ಸಿಂಗ್ – ಹೊಸಪೇಟೆ
28.ಸಿ ಸಿ‌ ಪಾಟೀಲ್ – ನರಗುಂದ
29.ಬಿಸಿ ನಾಗೇಶ್ – ತಿಪಟೂರು

error: Content is protected !!