ಬಂಗಾಳವನ್ನು ಗುಜರಾತ್ ಮಾಡಲು ಬಿಡಲ್ಲ-ದೀದಿ

ಕೋಲ್ಕತ್ತಾ(ಡಿ. 24) ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಿಜೆಪಿ ಮೇಲೆ ವಾಗ್ದಾಳಿ ಮಾಡಿದ್ದಾರೆ. ಪಶ್ಚಿಮ ಬಂಗಾಳವನ್ನು ಗುಜರಾತ್ ಮಾಡಲು ಬಿಡುವುದಿಲ್ಲ ಎಂದು ಅಬ್ಬರಿಸಿದ್ದಾರೆ.

ಪಶ್ಚಿಮ ಬಂಗಾಳ ಶ್ರೇಷ್ಠತೆ ಮತ್ತು ಅಭಿವೃದ್ಧಿ ಹಾದಿಯಲ್ಲಿದೆ. ಯಾವ ಕಾರಣಕ್ಕೂ ಬಿಜೆಪಿ ಯ ಪ್ರವೇಶಕ್ಕೆ ಅವಕಾಶ ಮಾಡಿಕೊಡುವುದಿಲ್ಲ ಎಂದು ಹೇಳಿದ್ದಾರೆ. ಬಂಗಾಳದ ಜನರು ಕೇಸರಿ ಪಕ್ಷದ ಪ್ರವೇಶವನ್ನು ತಡೆಯಬೇಕಾಗುತ್ತದೆ. ಹೊರಗಿನಿಂದ ಬಂದವರು ಇಲ್ಲಿ ಬಾವುಟ ಹಾರಿಸಲು ಬಿಡುವುದಿಲ್ಲ ಎಂದಿದ್ದಾರೆ.

ಪ್ರತಿಭಟನಾ ನಿರತ ರೈತರೊಂದಿಗೆ ಮಮತಾ ಮಾತು

ಬಿಜೆಪಿ ಅಧಿಕಾರಕ್ಕೆ ಬಂದರೆ ಹೊಸ ನೀತಿ ನಿಯಮ ಜಾರಿ ಮಾಡುತ್ತದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದು ಹಾಗಾಗಿ ಬಿಜೆಪಿಗೆ ಮತ ನೀಡಿ ಎಂದು ಮನವಿ ಮಾಡಿಕೊಂಡಿದ್ದರು.

error: Content is protected !!