ಮಕ್ಕಳನ್ನು ದುಡಿಸುತ್ತಿದ್ದ ಯಜಮಾನನ ಬಂಧನ

ಕೊಡಗು(ಪೋಲಿಸ್ ಪ್ರಕಟಣೆ): ಜಿಲ್ಲೆಯ ವಿರಾಜಪೇಟೆ ತಾಲೂಕಿನ ಬಾಡಗರಕೇರಿ ಗ್ರಾಮದಲ್ಲಿ ಬಾಲಕಾರ್ಮಿಕರಾಗಿ ದುಡಿಯುತ್ತಿದ್ದ ನಾಲ್ಕು ಮಕ್ಕಳನ್ನು ಪೊಲೀಸ್ ಇಲಾಖೆಯ ಮಕ್ಕಳ ವಿಶೇಷ ಪೊಲೀಸ್ ಘಟಕ ಹಾಗು ಕಾರ್ಮಿಕ ಇಲಾಖೆಯ ಅಧಿಕಾರಿಗಳು ಪತ್ತೆ ಹಚ್ಚಿ ಮಕ್ಕಳನ್ನು ರಕ್ಷಿಸಿ ಮಕ್ಕಳ ಕಲ್ಯಾಣ ಸಮಿತಿಯ ಮುಂದೆ ಹಾಜರುಪಡಿಸಿ ಬಳಿಕ ಸರಕಾರಿ ಬಾಲಮಂದಿರದಲ್ಲಿ ದಾಖಲಿಸಲಾಗಿದೆ.
ಅಪ್ರಾಪ್ತ ಮಕ್ಕಳನ್ನು ಬಾಲ ಕಾರ್ಮಿಕರಾಗಿ ದುಡಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧವಾಗಿದ್ದು ಅಂತಹ ಕೃತ್ಯಗಳು ಕಂಡು ಬಂದಲ್ಲಿ ಸಾರ್ವಜನಿಕರು ಕೂಡಲೇ 1098 ಮಕ್ಕಳ ಸಹಾಯವಾಣಿ ಸಂಖ್ಯೆ ದೂರವಾಣಿ ಮೂಲಕ ಕರೆ ಮಾಡಿ ಮಾಹಿತಿ ನೀಡುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀಮತಿ ಕ್ಷಮಾ ಮಿಶ್ರಾ ತಿಳಿಸಿದ್ದಾರೆ.