ಶಾಸಕ ರಮೇಶ್ ಜಾರಕಿಹೊಳಿ ಮೇಲಿ ಇರುವ ಆರೋಪಗಳಿಂದ ಮುಕ್ತರಾಗಿ ಮತ್ತೆ ಸಚಿವರಾಗಲಿದ್ದು,ಇವರ ಜೊತೆ ಮುನಿರತ್ನರಿಗೂ ಸಚಿವ ಸ್ಥಾನ ಸಿಗಲಿದೆ ಎಂದು ಯುವಜನ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ ಭರವಸೆ ನೀಡಿದ್ದಾರೆ.ಮಡಿಕೇರಿಯಲ್ಲಿ ನಡೆದ ಕ್ರೀಡಾ ಇಲಾಖೆಯ ಪ್ರಗತಿ ಪರಿಶೀಲನೆ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ ಈ ವಿಷಯ ತಿಳಿಸಿದರು.