ಸೆ.17 ರಂದು ಕ್ಷಯ ಮುಕ್ತ ಭಾರತ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ

ಮಡಿಕೇರಿ ಸೆ.16:-ದೇಶದಾದ್ಯಂತ ಕ್ಷಯ ಮುಕ್ತ ಭಾರತ ಅಭಿಯಾನ ಕಾರ್ಯಕ್ರಮವು ಸೆಪ್ಟೆಂಬರ್, 09 ರಂದು ಜಾರಿಗೊಳಿಸಿದ್ದು, ಈ ಕಾರ್ಯಕ್ರಮದ ಸಾಂಕೇತಿಕ ಉದ್ಘಾಟನಾ ಕಾರ್ಯಕ್ರಮವು ಸೆಪ್ಟೆಂಬರ್, 17 ರಂದು ಬೆಳಗ್ಗೆ 10 ಗಂಟೆಗೆ ನಗರದ ರೆಡ್ ಕ್ರಾಸ್ ಭವನದಲ್ಲಿ ಕ್ಷಯರೋಗಿಗಳಿಗೆ ಪೌಷ್ಠಿಕ ಆಹಾರ ವಿತರಿಸುವ ಮೂಲಕ ನಡೆಯಲಿದೆ ಎಂದು ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಅವರು ತಿಳಿಸಿದ್ದಾರೆ.