fbpx

ಅಡುಗೆ ಅನಿಲ, ಡೀಸಲ್ ಪೆಟ್ರೋಲ್ ದರದಲ್ಲಿ ಇಳಿಕೆ

ನವದೆಹಲಿ: ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ನಡುವ ಕೇಂದ್ರ ಸರ್ಕಾರ ಬಡವರಿಗೆ ಸಿಹಿ ಸುದ್ದಿ ನೀಡಿದೆ. ಪ್ರತಿ ಸಿಲಿಂಡರ್ ಖರೀದಿಗೆ 200 ರೂ. ಸಹಾಯಧನ ನೀಡಲಾಗುವುದು.

ಪ್ರಧಾನ ಮಂತ್ರಿ ಉಜ್ವಲ ಯೋಜನೆಯ 9 ಕೋಟಿಗೂ ಹೆಚ್ಚು ಫಲಾನುಭವಿಗಳಿಗೆ ಪ್ರತಿ ಗ್ಯಾಸ್ ಸಿಲಿಂಡರ್‌ ಗೆ (12 ಸಿಲಿಂಡರ್‌ ಗಳವರೆಗೆ) 200 ರೂ. ಸಬ್ಸಿಡಿ ನೀಡುತ್ತೇವೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಟ್ವೀಟ್ ಮಾಡಿದ್ದಾರೆ.

ಮಹತ್ವದ ಬೆಳವಣಿಗೆಯಲ್ಲಿ ಪೆಟ್ರೋಲ್ ಮೇಲಿನ ಅಬಕಾರಿ ಸುಂಕವನ್ನು ಪ್ರತಿ ಲೀಟರಿಗೆ 8 ರೂ., ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಪ್ರತಿ ಲೀಟರಿಗೆ 6 ರೂ. ಇಳಿಕೆ ಮಾಡಲಾಗಿದೆ. ಅಬಕಾರಿ ಸುಂಕ ಕಡಿತವಾದ ಹಿನ್ನೆಲೆಯಲ್ಲಿ ಒಂದು ಲೀಟರ್ ಪೆಟ್ರೋಲ್ ದರ 9.5 ರೂಪಾಯಿ ಇಳಿಕೆಯಾಗಿದೆ. ಇದರಿಂದ ಪ್ರತಿ ಲೀಟರ್‌ ಪೆಟ್ರೋಲ್‌ ದರ 9.5 ರೂ. ಹಾಗೂ ಡೀಸೆಲ್‌ ದರ 7 ರೂ.ಇಳಿಕೆಯಾಗಲಿದೆ.

error: Content is protected !!