fbpx

ಪ್ರಜ್ಞಾವಂತ ನಾಗರಿಕ ವೇದಿಕೆಯಿಂದ ಪ್ರತಿಭಟನೆ

ಕುಶಾಲನಗರದ ಪ್ರಜ್ಞಾವಂತ ನಾಗರಿಕ ವೇದಿಕೆಯಿಂದ ಪ್ರತಿಭಟನೆ ಮಾಡುವ ಮೂಲಕ ಪಟ್ಟಣ ಪಂಚಾಯ್ತಿ ಮುಖ್ಯಾಧಿಕಾರಿ ವರ್ಗಾವಣೆಗೆ ಆಕ್ರೋಶ ವ್ಯಕ್ತಪಡಿಸಲಾಯಿತು.

ಈ ಸಂದರ್ಭ ವೇದಿಕೆಯ ಸದಸ್ಯರುಗಳು ಶಾಸಕ ಅಪ್ಪಚ್ಚುರಂಜನ್ ವಿರುದ್ಧ ಧಿಕ್ಕಾರ ಕೂಗಿದರು.
ಭೂ ದಂಧೆಗೆ ಶಾಸಕರು ಸಹಕರಿಸುತ್ತಿದ್ದಾರೆ ಎಂಬ ಗಂಭೀರ ಆರೋಪ ಹೊರಿಸಿದರು.

ವಿ.ಪಿ.ಶಶಿಧರ್ ನೇತೃತ್ವದಲ್ಲಿ ಕುಶಾಲನಗರ ಪ.ಪಂ ಕಛೇರಿ ಮುಂದೆ ಪ್ರತಿಭಟನೆ ನಡೆಸಲಾಯಿತು. ಭ್ರಷ್ಟ ಅಧಿಕಾರಿ ನೇಮಕಕ್ಕೆ ವಿರೋಧ ವ್ಯಕ್ತಪಡಿಸಲಾಯಿತಲ್ಲದೆ, ಕೂಡಲೇ ವರ್ಗಾವಣೆಯನ್ನು ರದ್ದುಗೊಳಿಸಲು ಒತ್ತಾಯಿಸಲಾಯಿತು.

error: Content is protected !!